ದರ್ಬೆ ಮುಖ್ಯ ರಸ್ತೆಯ ವೃತ್ತಕ್ಕೆ ಅಂಬೇಡ್ಕರ್ ಹೆಸರಿಡಲು ಎಸ್.ಡಿ.ಪಿ.ಐ ಮನವಿ
ಪುತ್ತೂರು : (ಫೆ.03) ಪುತ್ತೂರು ದರ್ಬೆ ಮುಖ್ಯರಸ್ತೆ ವೃತ್ತಕ್ಕೆ ನಗರ ಸಭೆಯು ಕೋಚಣ್ಣ ರೈ ಎಂಬ ಹೆಸರಿಡುವುದಕ್ಕೆ ಆಕ್ಷೇಪಣೆಯನ್ನು ಆಗ್ರಹಿಸಿ ಎಸ್ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿಯು ದರ್ಬೆ ವೃತ್ತಕ್ಕೆ ಸಂವಿಧಾನ ಶಿಲ್ಪಿ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹೆಸರನ್ನು ಇಡಬೇಕೆಂದು ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನ ಸಭಾ ಉಪಾಧ್ಯಕ್ಷರಾದ ಇಬ್ರಾಹಿಂ ಸಾಗರ್ ರವರು ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್ಡಿಪಿಐ ಪುತ್ತೂರು ವಿಧಾನ ಸಭಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವು, ಕಾರ್ಯದರ್ಶಿ ಯಹ್ಯಾ ಕೂರ್ನಡ್ಕ ಹಾಗೂ ಸಮಿತಿ ಸದಸ್ಯರಾದ ಹಮೀದ್ ಸಾಲ್ಮರ ಮತ್ತು ಪಿ.ಬಿ.ಕೆ ಮಹಮ್ಮದ್ ರವರು ಉಪಸ್ಥಿತರಿದ್ದರು.