ರಾಮ್ ಸೇನಾ ವತಿಯಿಂದ ರಾಜ್ಯವ್ಯಾಪಿ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು : (ಜು.01) ರಾಮ್ ಸೇನಾ ಕರ್ನಾಟಕ (ರಿ) ಇದರ ವತಿಯಿಂದ ಹಮ್ಮಿಕೊಂಡಿರುವ ಪ್ರಕೃತಿ ಪೂಜನದ ಮುಖೇನ ರಾಜ್ಯಾದ್ಯಂತ ಗಿಡ ನೆಡುವ ಕಾರ್ಯಕ್ರಮವು ಮಂಗಳೂರಿನ ಕದ್ರಿ ಯೋಗಿ ಮಠದಲ್ಲಿ ಯೋಗಿ ನಿರ್ಮಲನಾಥ್ ರವರು ಗಿಡ ನೆಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಮ್ ಸೇನಾ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಕುಂದರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು, ಜಿಲ್ಲಾಧ್ಯಕ್ಷರಾದ ಕಿರಣ್ ಅಮೀನ್, ಎಂ.ಪಿ ದಿನೇಶ್, ಜಿಲ್ಲಾ ಉಪಾಧ್ಯಕ್ಷರಾದ ಹರ್ಷಿತ್ ಪೂಜಾರಿ ಅಡ್ಯಾರ್ ಪದವು, ಪುರುಷೋತ್ತಮ ಆಚಾರ್ಯ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.