ಶ್ರೀ ಮಹಿಷಮರ್ದಿನಿ ದೇವಸ್ಥಾನ ದ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ
ಪುತ್ತೂರು : ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ದ. ಕ ಇದರ ಜಿರ್ಣೋಧ್ಧಾರ ಕಾರ್ಯ ದ ತಾಂಬೂಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಸರ್ವ ಸೇವೆ ಪೂಜೆಯನ್ನು ಇಂದು ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಜಿರ್ಣೋಧ್ಧಾರ ಸಮಿತಿ ಕಾರ್ಯಧ್ಯಕ್ಷ ಶ್ರೀ ಸೀತಾರಾಮ ಶೆಟ್ಟಿ ಹೆಗ್ಡೆ ಹಿತ್ತಿಲು , ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಶ್ರಿ ಜಯಪ್ರಕಾಶ್ ಬದಿನಾರು, ಶ್ರೀಮತಿ ವಿಜಯಲಕ್ಷ್ಮಿ ಆರ್ ನಾಯಕ್ ನಿಡ್ಯ , ಶ್ರೀಮತಿ ರಾಧಿಕಾ ಆರ್ ಸಾಮಾಂತ್, ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಜಗನ್ನಾಥ ಶೆಟ್ಟಿ ನಡುಮನೆ, ಶ್ರೀಮತಿ ರಶ್ಮಿ ನಿರಂಜನ್ ರೈ ಮಠಂತಬೆಟ್ಟು, ಶ್ರೀ ಯೋಗಿಶ್ ಸಾಮಾನಿ, ಶ್ರೀ ಚಂದ್ರಹಾಸ ಗೌಡ ಸೇಡಿಯಾಪು ಸೇರಿದಂತೆ ಹಲವು ಭಕ್ತಾದಿಗಳು ಪಾಲ್ಗೊಂಡಿದ್ದರು.