ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವ ಸುಧಾಕರ್.
ಮಂಗಳೂರು : (ಎ.01) ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಕೆ. ಸುಧಾಕರ್ ನಡೆಸಿದರು. ಕೊರೊನಾ ನಿಯಂತ್ರಣಾ ಕ್ರಮಗಳು, ಲಸಿಕೆ ವಿತರಣೆ, ಜಿಲ್ಲೆಗೆ ಅಗತ್ಯವಿರುವ ವೈದ್ಯರು, ಸಿಬ್ಬಂದಿಗಳ ನೇಮಕಾತಿ, ವಿವಿಧ ಯೋಜನೆಗಳ ಅನುಷ್ಠಾನ ಸೇರಿದಂತೆ ಹಲವು ವಿಷಯಗಳನ್ನು ಪರಾಮರ್ಶಿಸಲಾಯಿತು.
ಈ ಸಂದರ್ಭದಲ್ಲಿ ಸಂಸದರಾದ ಶ್ರೀ ನಳಿನ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಶ್ರೀ ರಾಜೇಶ್ ನಾಯ್ಕ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಬಾಬು ಶಾಂತಿಗೋಡು ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.