ಪುತ್ತೂರು ಎ.ಪಿ.ಎಂ.ಸಿ ಯಲ್ಲಿ ನೂತನ ಗೋದಾಮು ಮತ್ತು ಸೋಲಾರ್ ಘಟಕ ಉದ್ಘಾಟನೆ.
ಪುತ್ತೂರು : ( ಏ.05) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪುತ್ತೂರು ಇಲ್ಲಿ ನೂತನವಾಗಿ ಆರಂಭಗೊಂಡ ಗೋದಾಮು ಮತ್ತು ಸೋಲಾರ್ ವಿದ್ಯುತ್ ಘಟಕ ಇದರ ಉದ್ಘಾಟನೆಯು ಮಾನ್ಯ ಸಂಸದರು ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ ನಳಿನ್ ಕುಮಾರ್ ಕಟೀಲ್, ಮಾನ್ಯ ಮೀನುಗಾರಿಕೆ ಮತ್ತು ಬಂದರು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಶ್ರೀ ಎಸ್.ಅಂಗಾರ ರವರ ಉಪಸ್ಥಿತಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಶ್ರೀ ಸಂಜೀವ ಮಠಂದೂರು, ಪುತ್ತೂರು ನಗರ ಸಭಾ ಅಧ್ಯಕ್ಷರಾದ ಶ್ರೀ ಜೀವಂಧರ್ ಜೈನ್, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಭಾಮಿ ಅಶೋಕ್ ಶೆಣೈ, ಎಪಿಎಂಸಿ ಅಧ್ಯಕ್ಷರಾದ ಶ್ರೀ ದಿನೇಶ್ ಮೆದು, ಉಪಾಧ್ಯಕ್ಷರಾದ ಶ್ರೀ ಎನ್.ಎಸ್. ಮಂಜುನಾಥ್, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ ಮತ್ತು ಗಣ್ಯರು ಉಪಸ್ಥಿತರಿದ್ದರು.