ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಚಾಲನೆ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ಸಾಧ್ಯತೆ.

ಬೆಂಗಳೂರು (ಅ.07) : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ತೀರ್ಮಾನಿಸಲು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಹು ನಿರೀಕ್ಷಿತ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ಕೊಟ್ಟರು.

Bjp state executive meeting

ಕಾರ್ಯಕಾರಿಣಿ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗುತ್ತಿದ್ದು ಪ್ರವಾಸ, ಸಂಘಟನೆ, ಕೇಂದ್ರ ಸರ್ಕಾರ ಮತ್ತು ರಾಜ್ಯಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡುವುದು ಸೇರಿದಂತೆ ಹತ್ತು ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲಿ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವನ್ನು ಹಿರಿಯ ನಾಯಕರು‌ ನೀಡಲಿದ್ದಾರೆ.

Bjp executive meeting

ಕಾರ್ಯಕಾರಿಣಿಯಲ್ಲಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್‍ಕುಮಾರ್ ಕಟೀಲ್, ಮಾಜಿ ಮುಖ್ಯ ಮಂತ್ರಿಗಳಾದ ಶ್ರೀ ಯಡಿಯೂರಪ್ಪ, ಶ್ರೀ ಡಿ. ವಿ. ಸದಾನಂದ ಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಶ್ರೀ ಅರುಣ್‍ಸಿಂಗ್, ಕೇಂದ್ರ ಸಚಿವರಾದ ಶೋಭ ಕರಂದ್ಲಾಜೆ, ಶ್ರೀ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ನಾಯಕರುಗಳಾದ ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಲಕ್ಷ್ಮಣ್ ಸವದಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!