ಮಂಗಳೂರು ಎನ್.ಎಸ್.ಯು.ಐ ಕಾಲೇಜು ಘಟಕಗಳ ಉದ್ಘಾಟನೆ.

ಮಂಗಳೂರು: (ಅ.19) ದಕ್ಷಿಣ ಕನ್ನಡ ಎನ್.ಎಸ್.ಯು.ಐ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಮಂಗಳೂರಿನ ನಾಲ್ಕು ಕಾಲೇಜು ಘಟಕಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ದಿನಾಂಕ 19.10.2019ರಂದು ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.

Nsui

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಶ್ರೀ ಕೆ.ಹರೀಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳೊಂದಿಗೆ ಧ್ವನಿಯಾಗಿ ಎನ್.ಎಸ್.ಯು.ಐ ವಿದ್ಯಾರ್ಥಿಗಳ ಪರವಾಗಿ ಸದಾ ನಿಮ್ಮೊಂದಿಗೆ ಇರುವೆ ಎಂದರು.

Nsui
ಸಮಾರಂಭದಲ್ಲಿ ಮಾಜಿ ಉಸ್ತುವಾರಿ ಸಚಿವರು ಹಾಗೂ ಶಾಸಕರಾದ ಶ್ರೀ ಯು.ಟಿ ಖಾದರ್ ರವರು ಮಾತನಾಡಿ, ದೇಶದ ಸಂಘಟನೆಯಾದ ಎನ್.ಎಸ್.ಯು.ಐ ಸಂಘವನ್ನು ಬಲಿಷ್ಟಗೊಳಿಸುವಂತೆ ವಿದ್ಯಾರ್ಥಿಗಳಲ್ಲಿ ಕರೆ ಇತ್ತರು.
ಬಳಿಕ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಿಥುನ್ ರೈ ಮಾತನಾಡಿ, ಎಲ್ಲಾ ಕಾಲೇಜುಗಳಲ್ಲಿ ಪದಾಧಿಕಾರಿಗಳ ಚುನಾವಣೆ ಕಡ್ಡಾಯವಾಗಿ ನಡೆಸಲು ಹೋರಾಟ ಮಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

Nsui
ಈ ಸಂದರ್ಭದಲ್ಲಿ ಎನ್.ಎಸ್.ಯು.ಐ ಉಸ್ತುವಾರಿಯಾದ ಶ್ರೀ ಸುರೇಶ್ ಶೆಟ್ಟಿ, ಮಂಗಳೂರು ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಗಿರೀಶ್ ಆಳ್ವ, ರಾಜ್ಯ ಯುವ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಸುಹೈಲ್ ಕಂದಕ್, ಪುದು ಗ್ರಾಮಪಂಚಾಯತ್ ಸದಸ್ಯರಾದ ಹಾಸೀರ್ ಬರಿಮಾರ್, ಎನ್.ಎಸ್.ಯು.ಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಶೌನಕ್ ರೈ, ಜಿಲ್ಲಾ ಉಪಾಧ್ಯಕ್ಷರಾದ ಅನ್ವಿತ್ ಕಟೀಲ್, ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಪ್ರ.ಕಾರ್ಯದರ್ಶಿ ಶೇಕ್ ಅಪ್ಫಾನ್ ಉಪಸ್ಥಿತರಿದ್ದರು.
ಜಿಲ್ಲಾ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಸ್ವಾಗತಿಸಿ, ವಂದಿಸಿದರು.

CATEGORIES
Share This

COMMENTS

Wordpress (0)
Disqus (0 )
error: Content is protected !!