ಲಯನ್ಸ್ ಕ್ಲಬ್ ಕಾವು ಪ್ರಯೋಜಕತ್ವದಲ್ಲಿ ಮಕ್ಕಳ ದಿನಾಚರಣೆ ಆಚರಣೆ
ಪುತ್ತೂರು : (ನ.14) ಕಾವು ಸರಕಾರಿ ಶಾಲೆಯಲ್ಲಿ ಪುತ್ತೂರು-ಕಾವು ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಜವಹರಲಾಲ್ ನೆಹರೂ ಅವರ ಹುಟ್ಟು ಹಬ್ಬ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಲಯನ್ಸ್ ಅಧ್ಯಕ್ಷ ಕಾವು ಲ.ಹೇಮನಾಥ್ ಶೆಟ್ಟಿ ಕಾವು, ಜಿಲ್ಲಾ ಪಂಚಾಯತ್ ಸದಸ್ಯೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ ಯವರು ಮಕ್ಕಳಿಗೆ ಶುಭಕೋರಿದರು.
ಲಯನ್ಸ್ ಕಾರ್ಯದರ್ಶಿ ಲ.ರಮೇಶ್ ರೈ ಸಾಂತ್ಯ, ಖಜಾಂಜಿ ಲ.ಕೃಷ್ಣಪ್ಪಗೌಡ, ಲ ಜಯಪ್ರಕಾಶ್ ರೈ ನೂಜಿ ಬೈಲು, ಎಸ್ ಡಿ ಎಮ್ ಸಿ ಅಧ್ಯಕ್ಷರು, ಮುಖ್ಯೋಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.