ಪುತ್ತೂರಿನಲ್ಲಿ ಶುಭಾರಂಭಗೊಂಡ ಹೋಟೆಲ್ “ರತ್ನಶ್ರೀ “
ಪುತ್ತೂರು : (ನ.18) ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭದಲ್ಲಿಗೊಂಡ ಜಯಂತ್ ಶೆಟ್ಟಿ ಕಂಬಳದಡ್ಡ ಮಾಲಕತ್ವದ “ರತ್ನಶ್ರೀ ಹೋಟೆಲ್” ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾವು ಹೇಮನಾಥ್ ಶೆಟ್ಟಿ ಯವರು ಭಾಗವಹಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೊರ್ಕರ್, ತಾಲೂಕು ಪಂಚಾಯತ್ ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ , ನಗರಸಭಾ ಮಾಜಿ ಸದಸ್ಯ ಮುಖೇಶ್ ಕೆಮ್ಮೀಂಜೆ, ಕಾಂಗ್ರೆಸ್ ಮುಖಂಡರಾದ ಕೃಷ್ಣ ಪ್ರಸಾದ್ ಆಳ್ವ, ಅಶ್ವಿನಿ ಚಂದ್ರಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ : ರವಿಪ್ರಸಾದ್ ಶೆಟ್ಟಿ ಬನ್ನೂರು