ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವೀಕ್ಷಕರಾಗಿ ಪ್ರದೀಪ್ ರೈ ಪಾಂಬಾರು
ಬೆಂಗಳೂರು : (ನ.23) ರಾಜ್ಯಾದ್ಯಂತ ಉಪ ಚುನಾವಣೆ ಕಣ ರಂಗಗೇರುತ್ತಿದ್ದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಯು ಹಲವು ನಾಯಕರನ್ನು ಕ್ಷೇತ್ರವಾರು ವೀಕ್ಷಕರನ್ನಾಗಿ ನೇಮಿಸಿದೆ. ಅಂತೆಯೇ ಉತ್ತರ ಕರ್ನಾಟಕದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ವೀಕ್ಷಕರನ್ನಾಗಿ
ಯುವ ಉಧ್ಯಮಿ ಹಾಗೂ ಕರ್ನಾಟಕ ರಾಜ್ಯ ಇಂಟಕ್ ಉಪಾಧ್ಯಕ್ಷರಾದ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮೂಲದ ಶ್ರೀ ಪ್ರದೀಪ್ ಕುಮಾರ್ ರೈ ಪಾಂಬಾರು ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ದಿನೇಶ್ ಗುಂಡುರಾವ್ ಅವರ ನಿರ್ದೇಶನದಂತೆ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಶ್ರೀ ಶಫಿಯುಲ್ಲಾರವರು ನೇಮಕಗೋಳಿಸಿ ಆದೇಶಿಸಿದ್ದಾರೆ.
ಪ್ರದೀಪ್ ಕುಮಾರ್ ರೈ ಪಾಂಬಾರು ಇವರು ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸೆನೆಟ್ ಸದಸ್ಯರಾಗಿಯು ಕಾರ್ಯನಿರ್ವಹಿಸಿದ್ದರು.