ಶೇಖಮಲೆ ಪಯಂದೂರು ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ
ಪುತ್ತೂರು : (ನ.24) ನೆಟ್ಟಣಿಗೆ ಮುಡ್ನೂರು ಜಿಲ್ಲಾ ಪಂಚಾಯತು ಕ್ಷೇತ್ರದ ಶೇಖಮಲೆ ಪಯಂದೂರು ರಸ್ತೆಗೆ ಕಾಂಕ್ರೀಟಿಕರಣಕ್ಕೆ 3ಲಕ್ಷ ಅನುದಾನವಿರಿಸಿದ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ
ಶ್ರೀಮತಿ ಅನಿತ ಹೇಮನಾಥ್ ಶೆಟ್ಟಿ ಇಂದು ನವಂಬರ್ 24 ರಂದು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿದಿಗಳು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದರು.