ಕೆದಂಬಾಡಿ ಕೋರಿಕ್ಕಾರು ಪ್ರದೇಶಕ್ಕೆ ಕುಡಿಯುವ ನೀರಿನ ವ್ಯವಸ್ಥೆಗೆ 6.80 ಲಕ್ಷ ಅನುದಾನ.
ಪುತ್ತೂರು : (ನ.24) ನೆಟ್ಟಣಿಗೆ ಮುಡ್ನೂರು ಜಿಲ್ಲಾ ಪಂಚಾಯತು ಕ್ಷೇತ್ರದ ಕೆದಂಬಾಡಿ ಗ್ರಾಮದ ಕುರಿಕ್ಕಾರ ಕೋರಿಕ್ಕಾರು ಪ್ರದೇಶಕ್ಕೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ರೂ 6.80 ಲಕ್ಷ ಅನುದಾನವಿರಿಸಿದ ಸ್ಥಳೀಯ ಜಿಲ್ಲಾ ಪಂಚಾಯತು ಸದಸ್ಯೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ ನವಂಬರ್ 24 ರಂದು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಪಂಚಾಯತು ಸದಸ್ಯ ಹಿರಿಯರಾದ ಚಂದ್ರಹಾಸ್ ರೈ ಬೋಳೋಡಿ, ಪಂಚಾಯತು ಅಧ್ಯಕ್ಷ ಪ್ರವೀಣ್ ಶೆಟ್ಟಿ , ವಲಯ ಕಾಂಗ್ರೆಸ್ ಅಧ್ಯಕ್ಷ ಮನೋಹರ್ ರೈ ಮತ್ತು ಫಲಾನುಭವಿ ಗ್ರಾಮಸ್ಥರು ಉಪಸ್ಥಿತರಿದ್ದರು.