ಜಿ.ಪಂ. ಸದಸ್ಯೆ ಅನಿತ ಹೇಮನಾಥ್ ಶೆಟ್ಟಿಯಿಂದ ಗೋಳಿತ್ತಡಿ ಶಾಲೆಗೆ 1.50 ಲಕ್ಷ ಅನುದಾನ.

ಪುತ್ತೂರು : (ಡಿ.02) ನೆಟ್ಟಣಿಗೆ ಮುಡ್ನೂರು ಜಿಲ್ಲಾ ಪಂಚಾಯತು ಕ್ಷೇತ್ರದ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತು ವ್ಯಾಪ್ತಿಯ ಕರ್ನಾಟಕ ಕೇರಳ ಗಡಿನಾಡು ಪ್ರದೇಶದ ಗೋಳಿತ್ತಡಿ ಸರಕಾರಿ ಪ್ರಾಥಮಿಕ ಶಾಲೆಗೆ ಕೊಳವೆ ಕೊರೆದು ಪಂಪು ಅಳವಡಿಸಲು ₹1.50ಲಕ್ಷ ಅನುದಾನ ಬಿಡುಗಡೆಗೊಳಿಸಿದ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿಯವರು ಶಾಲೆಗೆ ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸಿದರು.

Anitha Hemanath shetty
ಈ ಸಂದರ್ಭದಲ್ಲಿ ಸ್ಥಳೀಯ ಪಂಚಾಯತು ಉಪಾಧ್ಯಕ್ಷ ಶ್ರೀರಾಮ್ ಪಕ್ಕಳ, ಸದಸ್ಯರಾದ ಸುರೇಶ್ ನಾಯ್ಕ ಮೇನಾಲ, ಅಬ್ದುಲ್ಲಾ ಮೇನಾಲ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಕಟ್ಟಪುಣಿ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ  ವಿದ್ಯಾ ಕುಮಾರಿ ಉಪಸ್ಥಿತರಿದ್ದರು.

CATEGORIES
Share This

COMMENTS

Wordpress (0)
Disqus ( )
error: Content is protected !!