ಗೆಜ್ಜೆಗಿರಿ ನಂದನ ಬಿತ್ತಿಲು ರಸ್ತೆ ಕಾಂಕ್ರೀಟಿಕರಣಕ್ಕೆ ಜಿ.ಪಂ. ಸದಸ್ಯೆ ಅನಿತ ಹೇಮನಾಥ್ ಶೆಟ್ಟಿಯಿಂದ 4.50 ಲಕ್ಷ ಅನುದಾನ

ಪುತ್ತೂರು : (ಡಿ.16) ನೆಟ್ಟಣಿಗೆ ಮುಡ್ನೂರು ಜಿಲ್ಲಾ ಪಂಚಾಯತು ಕ್ಷೇತ್ರದ ಬಡಗನ್ನೂರು ಗ್ರಾಮದ ಕೋಟಿ ಚೆನ್ನಯರ ಮೂಲ ಸ್ಥಾನ ಗೆಜ್ಜೆಗಿರಿ ನಂದನ ಬಿತ್ತಿಲಿಗೆ ಹೋಗುವ ರಸ್ತೆಗೆ ಕಾಂಕ್ರೀಟಿಕರಣಕ್ಕೆ 4.50ಲಕ್ಷ ಅನುದಾನವಿರಿಸಿ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಸ್ಥಳೀಯ ಜಿಲ್ಲಾ ಪಂಚಾಯತು ಸದಸ್ಯೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ ಯವರು ಚಾಲನೆ ನೀಡಿದರು.

Anitha Hemanath shetty
ಈ ಸಂದರ್ಭದಲ್ಲಿ ಗೆಜ್ಜೆಗಿರಿ ನಂದನ ಬಿತ್ತಿಲಿನ ಯಾಜಮಾನ ಶ್ರೀಧರ ಪೂಜಾರಿ, ಬಡಗನ್ನೂರು ಗ್ರಾ.ಪಂ. ಅಧ್ಯಕ್ಷ ಕೇಶವ ಗೌಡ ಕನ್ನಯ, ಗ್ರಾ ಪಂ ಸದಸ್ಯ ಗುರುಪ್ರಸಾದ್ ರೈ, ಜಯರಾಜ್ ರೈ ಅಣಿಲೆ ಮತ್ತು ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು .

CATEGORIES
Share This

COMMENTS

Wordpress (0)
Disqus ( )
error: Content is protected !!